ಪ್ರತಿನಿಧಿ ವರದಿ ಹನೂರು
ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ವಿದ್ಯಾಭ್ಯಾಸದ ಕಡೆ ಗಮನ ನೀಡಿದರೆ ಭವಿಷ್ಯ ಬಹಳಷ್ಟು ಸುಂದರವಾಗಿರುತ್ತದೆ ಎಂದು ಹನೂರು ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಶಶಿಕುಮಾರ್ ಹೇಳಿದರು.
ಪಟ್ಟಣದ ಜಿವಿ ಗೌಡ ಪ್ರಥಮ ದರ್ಜೆ ಕಾಲೇಜು ಮಕ್ಕಳಿಗೆ ಹನೂರು ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ತೆರದ ಮನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ದುಶ್ಚಟಕೆ ಬಲಿಯಾಗಬಾರದು. ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಮದ್ಯಪಾನ, ಧೂಮಪಾನ ಸೇರಿದಂತೆ ಇನ್ನಿತರ ಮಾದಕ ವಸ್ತುಗಳನ್ನು ತಿಂದುಕೊಂಡು ಹೋಗುವುದು ದ್ವಿಚಕ್ರ ವಾಹನ ಬೇಗವಾಗಿ ಓಡಿಸಬಾರದು. ಹೆಲ್ಮೆಟ್ ಇಲ್ಲದೆ ಹಾಗೂ ಪ್ರತಿಯೊಬ್ಬರೂ ಇನ್ಸೂರೆನ್ಸ್ ಮಾಡಿಸಿಕೊಳ್ಳಬೇಕು. 18 ವರ್ಷಕ್ಕೂ ಮುಂಚೆ ಅಪ್ರಾಪ್ತ ಬಾಲಕಿಯರನ್ನ ಮದುವೆ ಮಾಡಿ ಕೊಳ್ಳಬೇಡಿ. ಪೋಕ್ಸಂ ಕಾಯ್ದೆ ಅಡಿ ಶಿಕ್ಷೆಗೆ ಒಳಪಡಬೇಕಾಗುತ್ತದೆ. ಎಲ್ಲ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿ ತಂದೆ-ತಾಯಿಯಂದಿರಿಗೆ ಯಾವುದೇ ನೋವಾಗದ ರೀತಿಯಲ್ಲಿ ನಡೆದುಕೊಳ್ಳಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಎಂದರು.
ಪೊಲೀಸ್ ಠಾಣೆಯಲ್ಲಿರುವ ಎಲ್ಲಾ ಸಿಬ್ಬಂದಿಗಳನ್ನು ಸರ್ಕಲ್ ಇನ್ಸ್ಪೆಕ್ಟರ್ ಶಶಿಕುಮಾರ್ ರವರು ಪರಿಚಯಿಸಿದರು ಪೊಲೀಸ್ ಠಾಣೆಗೆ ಬರುವ ವಿದ್ಯಾರ್ಥಿಗಳು ಭಯಪಡುವ ಅವಶ್ಯಕತೆ ಇಲ್ಲ ನಮ್ಮ ಪೊಲೀಸ್ ಸಿಬ್ಬಂದಿಗಳು ಕಾನೂನು ಚೌಕಟ್ಟಿನಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಅವರ ಜೊತೆ ನೀವು ಪ್ರೀತಿ ವಿಶ್ವಾಸದಿಂದ ಮಾತನಾಡಿಸಬಹುದು ಪೊಲೀಸ್ ಎಂದುಕೊಂಡು ಭಯ ಪಡುವ ಅವಶ್ಯಕತೆ ಇಲ್ಲ ಎಂದರು. ಪೊಲೀಸ್ ಸಿಬ್ಬಂದಿಗಳು ಹಾಗೂ ಮಕ್ಕಳು ಉಪಸ್ಥಿತರಿದ್ದರು.