ಪ್ರತಿನಿಧಿ ವರದಿ ಹನೂರು
ತಾಲೂಕು ಮಟ್ಟದ ಪಂದ್ಯಾಟದಲ್ಲಿ ಶ್ರೀವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾರೆ.
ಪಟ್ಟಣದ ಕ್ರಿಸ್ತ ರಾಜ ವಿದ್ಯಾ ಸಂಸ್ಥೆ ಹಾಗೂ ವಿವೇಕಾನಂದ ಶಾಲೆಯಲ್ಲಿ ಆ.20 ರಿಂದ 22 ರವರೆಗೆ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶ್ರೀವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಪಂದ್ಯಾಟಗಳಲ್ಲಿ ವಿಜೇತರಾಗಿದ್ದಾರೆ.
ಥ್ರೋಬಾಲ್ ಪಂದ್ಯಾಟದಲ್ಲಿ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಖೊಖೋ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ, ಕಬ್ಬಡಿ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ನಾಗಪ್ಪಅವರನ್ನು ಸಂಸ್ಥೆಯ ಅಧ್ಯಕ್ಷ ಉಮಾರಾಜೇಂದ್ರನ್, ಕಾರ್ಯದರ್ಶಿ ಸುರೇಶ್ನಾಯ್ಡು, ಸಂಚಾಲಕ ರಾಜೇಂದ್ರನ್, ಖಜಾಂಚಿ ಶ್ರೀದೇವಿ ಸುರೇಶ್ನಾಯ್ಡು, ಮುಖ್ಯ ಶಿಕ್ಷಕ ಮಧುಸೂದನ್ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.