ಮಂಡ್ಯ : ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ರಾಜ್ಯದ ಗಮನ ಸೆಳೆದಿರೋ ಮಂಡ್ಯ ಕ್ಷೇತ್ರ ಬಹುತೇಕ ಜೆಡಿಎಸ್ಗೆ ಫಿಕ್ಸ್ ಆಗಿದೆ. ಆದರೆ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಗೆ ಆಕಾಂಕ್ಷಿಯಾಗಿರುವ ಸುಮಲತಾ ಅಂಬರೀಶ್ ನಾನು ಸ್ವರ್ಧೆ ಮಾಡೇ ಮಾಡುತ್ತೇನೆ ಎಂದು ಹೇಳುವ ಮೂಲಕ ಸವಾಲು ಹಾಕಿದರು. ಹೀಗಾಗಿ ರೋಚಕ ತಿರುವಿನತ್ತ ಮಂಡ್ಯ ಲೋಕಾಸಭಾ ಅಖಾಡ ತಿರುಗಿದ್ದು, ಈ ಮಧ್ಯೆ ಸಂಸದೆ ಸುಮಲತಾ ಅಂಬರೀಶ್ ಮಹತ್ವದ ಮುಖಂಡರ ಸಭೆ ಕರೆದಿದ್ದಾರೆ. ತಮ್ಮ ಬೆಂಗಳೂರು ನಿವಾಸದಲ್ಲಿ ಪ್ರಮುಖ ಮುಖಂಡರ ಜೊತೆ ಸುಮಲತಾ ಅವರು ಸಭೆ ನಡೆಸಲಿದ್ದಾರೆ. ಅಂಬರೀಶ್ ಹಾಗೂ ಸುಮಲತಾರ ಪ್ರಮುಖ ಬೆಂಬಲಿಗರು , ಜೊತೆಗೆ ಕೆಲ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಕೂಡ ಸಭೆಯಲ್ಲಿ ಭಾಗಿ ಆಗುವ ಸಾಧ್ಯತೆ ಇದೆ. ಚುನಾವಣೆಗೆ ಸಿದ್ದತೆ ಕುರಿತು ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿ ಬಿಜೆಪಿ ಟಿಕೆಟ್ ತಪ್ಪಿದ್ರೆ ಪಕ್ಷೇತರವಾಗಿ ಸ್ಪರ್ಧಿಸುವ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ ಎನ್ನಲಾಗಿದೆ.