ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಶನಿವಾರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸ್ಥಳೀಯ ಶಾಸಕ, ಮಾಜಿ ಸಂಸದರು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರೊಡನೆ ಮತಯಾಚನೆ ಮಾಡಿದರು.
ಮೊದಲಿಗೆ ತಾಲೂಕಿನ ಚಂದಕವಾಡಿ ಗ್ರಾಮದಲ್ಲಿ ಗ್ರಾಮದ ಅಧಿದೇವತೆ ಲಕ್ಷ್ಮೀ ದೇವಿಗೆ ಪೂಜೆಸಲ್ಲಿ ಮತಯಾಚನೆ ಆರಂಭಿಸಿದರು. ಬಳಿಕ ನಾಗವಳ್ಳಿ, ಕಾಗಲವಾಡಿ, ಆಲೂರು ಹೊಮ್ಮ, ದೊಡ್ಡರಾಯಪೇಟೆ, ಮಾದಾಪುರ ಹಾಗೂ ಮಂಗಲ ಗ್ರಾಮದಲ್ಲಿ ಮತಯಾಚನೆ ಮಾಡಿದರು.
ಇದೇ ಸಂದರ್ಭದಲ್ಲಿ ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತಮಾಡಿ,ಕ್ಷೇತ್ರದಲ್ಲಿ ಮಾಜಿ ಸಂಸದ ಧ್ರುವನಾರಾಯಣ ಅವರು ಹಾಗೂ ಸಚಿವರಾಗಿದ್ದ ದಿ.ಎಚ್ಎಸ್ ಮಹದೇವ ಪ್ರಸಾದ್ ಅವರು ಹಾಗೂ ನಾನು ಸೇರಿದಂತೆ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇವೆ. ಹೀಗೆ ಜಿಲ್ಲೆಯ ಇನ್ನಷ್ಟು ಅಭಿವೃದ್ದಿಗಾಗಿ ಕಾಂಗ್ರೆಸ್ ಅಭ್ಯರ್ಥಿಆಗಿರುವ ಸುನಿಲ್ ಬೋಸ್ ಅವರನ್ನು ಈ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
2013 ರಿಂದ 18 ರವರೆಗೆ ಸಿಎಂ ಆಗಿದ್ದ ಸಿದ್ದರಾ ಮಯ್ಯ ಅವರು ಚಾಮರಾಜನಗರ ಜಿಲ್ಲೆಯ ಬಗ್ಗೆ ಕಾಳಜಿ ವಹಿಸಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಿದರು. ಅವರ ನಂತರ ಬಂದಂತಹ ಬಿಜೆಪಿ ಸರ್ಕಾರ ಜಿಲ್ಲೆಯನ್ನು ಕಡೆಗಣಿಸಿತು. ಬಿಜೆಪಿಯಲ್ಲಿ ಐದು ವರ್ಷಗಳ ಅವಧಿಯಲ್ಲಿ ಅನೇಕ ಜನ ಮುಖ್ಯಮಂತ್ರಿಗಳಾದರು. ಹೀಗಾಗಿ ಅವರು ಯಾವುದೇ ರೀತಿಯಾದ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಇದರಿಂದ ಅವರಿಗೆ ಜನರ ಬಳಿ ಬಂದು ಮತ ಕೇಳುವ ನೈತಿಕತೆಯೇ ಇಲ್ಲ ಎಂದರು.
ನಮ್ಮ ಕಾಂಗ್ರೆಸ್ ಸರ್ಕಾರ ಜನರಿಗೆ ಅನುಕೂಲ ವಾಗುವಂತೆ ಐದು ಗ್ಯಾರಂಟಿಗಳನ್ನು ನೀಡಿದೆ. ಈ ಯೋಜನೆಗಳಿಂದ ಜನರಿಗೆ ಹೆಚ್ಚಿನ ಅನುಕೂಲ ವಾಗಿದೆ. ನಾವು ಈ ಕಾರ್ಯಕ್ರಮಗಳಿಂದಲೇ ಚುನಾವಣೆಯಲ್ಲಿ ಜನರ ಬಳಿಗೆ ಹೋಗುತ್ತಿದ್ದೇವೆ. ಬಿಜೆಪಿಯವರು ಜನರ ಬಳಿ ಹೋಗಿ ಹೇಗೆ ಮತ ಕೇಳಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರೀಸ್ವಾ ಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್,ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುರುಸ್ವಾಮಿ, ಮಹಮದ್ ಅಸ್ಗರ್ ಮುನ್ನಾ, ಜಿಪಂ ಮಾಜಿ ಸದಸ್ಯ ಆರ್.ಬಾಲರಾಜು, ಅಯ್ಯನಪುರ ಶಿವಕುಮಾರ್, ಚಿಕ್ಕಮಹದೇವು, ಕಾಗಲವಾಡಿ ಚಂದ್ರು, ಆಲೂರು ಪ್ರದೀಪ್ ಸೇರಿದಂತೆ ಇತರರು ಇದ್ದರು.
13ಸಿಎಚ್ಎನ್.5:ಚಾಮರಾಜನಗರ ತಾಲೂಕಿನ ಚಂದಕವಾಡಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಪಕ್ಷದ ನಾಯಕರು, ಕಾರ್ಯಕರ್ತ ರೊಡನೆ ಮತಯಾಚನೆ ಮಾಡಿದರು.