ತುಮಕೂರಿನ ಉಪ್ಪಾರಹಳ್ಳಿಯ ಸರ್ವೋದಯ ಶಾಲೆ ಬಳಿ ಸರ್ಕಾರಿ ನೌಕರ ಎಫ್ಡಿಎ ಹರೀಶ್(45) ರಸ್ತೆಯಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಹರೀಶ್ ರಸ್ತೆಯಲ್ಲೇ ಪ್ರಾಣಬಿಟ್ಟಿದ್ದಾರೆ. ಮೇಲ್ನೋಟಕ್ಕೆ ಕಂಠಪೂರ್ತಿ ಕುಡಿದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.