ಪ್ರತಿನಿಧಿ ವರದಿ ಸಕಲೇಶಪುರ
ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ಯಲ್ಲಿ ಶೇ.80% ಅಂಕ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಧ್ಯಾರ್ಥಿಗಳಿಗೆ ಎಸ್ಸಿ/ ಎಸ್ಟಿ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರವನ್ನು ಜೂ.22ರಂದು ಹಮ್ಮಿಕೊಳ್ಳಲಾಗಿದೆ ಎಂದು ನಿವೃತ್ತ ಪಿಡಿಓ ಕೊಮಾರಯ್ಯ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜೂ.22ರ ಶನಿವಾರದಂದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ 10:30 ಕ್ಕೆ ಎಸ್.ಎಸ್.ಎಲ್.ಸಿ.ಹಾಗೂ ಪಿಯುಸಿ ಯಲ್ಲಿ ಶೇ 80% ರಷ್ಟು ಅಂಕ ಗಳಿಸಿದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಸಿ ಎಸ್ಟಿ ನೌಕರರ ಸಂಘದ ಅಧ್ಯಕ್ಷ ಎಂ.ಎಸ್.ಮಹೇಶ್ ವಹಿಸುವರು. ಉದ್ಘಾಟನೆಯನ್ನು ಸ್ಥಳೀಯ ಶಾಸಕ ಎಸ್.ಮಂಜುನಾಥ್ ನೆರವೇರಿಸುವರು. ವಿದ್ಯಾರ್ಥಿಗಳಿಗೆ ದಿಕ್ಸೂಚಿ ಭಾಷಣವನ್ನು ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ನಡೆಸಿಕೊಡಲಿದ್ದು, ವಿಶೇಷ ಆಹ್ವಾನಿತರಾಗಿ ಲೋಕಸಭಾ ಸದಸ್ಯ ಶ್ರೇಯಸ್ ಪಟೇಲ್, ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡ ಮುರಳಿ ಮೋಹನ್, ಭಾಗವಹಿಸಲಿದ್ದು , ಮುಖ್ಯ ಅತಿಥಿಗಳಾಗಿ ಐಎಫ್ ಅಧಿಕಾರಿ ಎನ್.ಇ.ಕ್ರಾಂತಿ, ಕೆ.ಎ.ಎಸ್.ಅಧಿಕಾರಿ ಕರುಣಾಕರ್ ಪಾಲ್ಗೊಳ್ಳಲ್ಲಿದ್ದಾರೆ ಎಂದರು.
ಭೈರಪ್ಪ, ರುದ್ರಪ್ಪ , ನಿರ್ವಾಣಯ್ಯ, ಪೃಥ್ವಿ ಮೊದಲಾದವರು ಉಪಸ್ಥಿತರಿದ್ದರು.