ಕೊಳ್ಳೇಗಾಲ ಪಟ್ಟಣದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಿದ್ದ ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ನೃತ್ಯ ಕಾರ್ಯಕ್ರಮ ನಡೆಸಿಕೊಟ್ಟರು. ರಂಗೋಲೆ ಸ್ಪರ್ಧೆ, ಭಾವಗೀತೆ, ಚಲನಚಿತ್ರ ಗೀತೆ ಹಾಡುಗಾರಿಕೆ, ಪ್ರಬಂಧ ಸ್ಪರ್ಧೆ, ಡ್ರಾಯಿಂಗ್ಸ್, ಏಕಾಭಿನಯಪಾತ್ರ, ಚರ್ಚೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ಜಯಲಕ್ಷ್ಮಿ ವಹಿಸಿದ್ದರು. ಪ್ರಾಧ್ಯಾಪಕರಾದ ಡಾ.ಸುಧಾ, ಡಾ.ಪ್ರೇಮ್ ಕುಮಾರ್, ಡಾ.ಹೇಮ ಕುಮಾರ್, ಮಾದೇವಯ್ಯ, ಸಾಂಸ್ಕೃತಿಕ ವೇದಿಕೆ ಸಂಚಾಲಕ ಎಸ್.ಸುಂದರಮೂರ್ತಿ ಇದ್ದರು.
Leave a comment