ಪ್ರತಿನಿಧಿ ವರದಿ ಬೇಲೂರು
ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಭಾಷ್ಯೆಯನ್ನು ಬರೆದ ೧೨ನೇ ಶತಮಾನದ ಬಸವಾದಿ ಶರಣರ ವಚನ ಸಾಹಿತ್ಯ ವೈಜ್ಞಾನಿಕತೆ, ವೈಚಾರಿಕತೆ ಮತ್ತು ಸಮಾನತೆಮ ಭಾವನೆಗಳನ್ನು ಹೊಂದಿದೆ ಎಂದು ಬೇಲೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಾ.ನ.ಮಂಜೇಗೌಡ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಮತ್ತು ಕದಳಿ ಮಹಿಳಾ ವೇದಿಕೆ ವತಿಯಿಂದ ಹಮ್ಮಿಕೊಂಡಿದೆ ಪೂಜ್ಯ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ೧೦೯ನೇ ಜನ್ಮ ದಿನ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನ ಕಾರ್ಯಕ್ರಮ ಉದ್ಘಾಟನೆ ನಡೆಸಿ ಮಾತನಾಡಿದರು.
ಶರಣರು ಸಮಾಜದಲ್ಲಿ ಅಡಗಿದ ಅಸಮಾನತೆ, ಮೂಢನಂಬಿಕೆ, ಅಂಧಾನುರಣಗಳನ್ನು ಖಂಡಿಸಿ, ಸಮಾಜದಲ್ಲಿ ಸಮಾನತೆ ಮತ್ತು ಸಹಭಾಳ್ವೆಗೆ ಮುನ್ನುಡಿ ಬರೆದ ಪ್ರಮುಖ ಕಾಲಘಟ್ಟವಾಗಿದೆ. ಪ್ರತಿ ವಚನಗಳು ಅನುಭವದಿಂದ ಕೂಡಿದ ಕಾರಣದಿಂದಲೇ ಇಂದಿಗೂ ಸಮಾಜದಲ್ಲಿ ವಚನ ಸಾಹಿತ್ಯ ಜನಸಾಮಾನ್ಯರ ಬಳಿ ತಲುಪಲು ಸಾದ್ಯವಾಗುತ್ತಿದೆ. ರಾಮಾಯಣ, ಮಹಾಭಾರತ ಮಹಾಕಾವ್ಯಗಳಂತೆ ವಚನ ಸಾಹಿತ್ಯ ಕೂಡ ಶ್ರೇಷ್ಠತೆಯನ್ನು ಹೊಂದಿದೆ. ಇಂತಹ ಕಾರ್ಯಕ್ರಮವನ್ನು ತಾಲೂಕು ಶರಣ ಸಾಹಿತ್ಯ ಪರಿಷತ್ತು ನಿಜಕ್ಕೂ ಶಾಲಾ ಕಾಲೇಜುಗಳಲ್ಲಿ ವಿಚಾರಧಾರೆಗಳನ್ನು ತಿಳಿಸಲು ಮುಂದಾಗಿರುವುದು ನಿಜಕ್ಕೂ ಔಚಿತ್ಯಪೂರ್ಣ ಕೂಡಿದೆ ಎಂದರು.
ಕಡೂರಿನ ಶರಣ ಸಂಸ್ಕೃತಿ ವಿಚಾರವಾದಿ ಡಾ.ಜಿ.ವಿ.ಮಂಜುನಾಥ, ಬೇಲೂರು ತಾಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಬ್ಬಾಳು ಹಾಲಪ್ಪ ಮಾತನಾಡಿದರು. ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಶುಪಾಲ ಹರೀಶ್, ಹಾಸನ ಜಿಲ್ಲಾ ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಚಂದನ್ ಕುಮಾರ್, ಪ್ರಗತಿಪರ ವಿಚಾರವಾಧಿ ಗೋವಿನಹಳ್ಳಿ ರವಿ, ಯುವ ಘಟಕದ ತಾಲೂಕು ಅಧ್ಯಕ್ಷ ಆರ್.ಎಸ್.ಮಹೇಶ್, ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಶಶಿರೇಖ ರಾಜಶೇಖರ, ಉಪಾಧ್ಯಕ್ಷೆ ಗೀತಾ ಶಿವರಾಜ್, ಹಳೇಬೀಡು ಹೋಬಳಿ ಘಟಕದ ಅಧ್ಯಕ್ಷೆ ವಿನುತ ಧನಂಜಯ, ಉಪನ್ಯಾಸಕ ಲಕ್ಷ್ಮೀನಾರಾಯಣ, ಸಂಘಟನಾ ಕಾರ್ಯದರ್ಶಿ ಧನಂಜಯ, ಕಾಲೇಜು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
——————-
ಪೋಟೋ: ಬೇಲೂರು ತಾಲೂಕು ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಪಟ್ಟಣದ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಸಂಸ್ಥಾಪನಾ ದಿನ ಕಾರ್ಯಕ್ರಮವನ್ನು ಉದ್ಘಾಟನೆ ನಡೆಸಲಾಯಿತು.