ಪ್ರತಿನಿಧಿ ವರದಿ ಮೈಸೂರು
ಮಹಿಳೆಯೊಬ್ಬರು ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣವಿದ್ದ ಬ್ಯಾಗ್ ಅನ್ನು ಮರಳಿ ಮಹಿಳೆ ಕೈಸೇರಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಇನ್ಸ್ ಪೆಕ್ಟರ್ ಮಹಮದ್ ಸಲೀಂ ಅಬ್ಬಾಸ್ ಅವರ ಸಮಯೋಚಿತ ಕಾರ್ಯಾಚರಣೆಯಿಂದ ಚಿನ್ನದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿದೆ. ಸಾತಗಳ್ಳಿ ನಿವಾಸಿ ಜ್ಯೋತಿ ಎಂಬುವರು ಆಟೋದಲ್ಲಿ ಮೈಸೂರಿನ ಅಶೋಕ ರಸ್ತೆಯಲ್ಲಿರುವ ಲಲಿತಾ ಜ್ಯೂಯಲರಿಗೆ ಬಂದಿದ್ದಾರೆ. ಹಿಂದೆ ಖರೀದಿಸಿದ್ದ 60 ಗ್ರಾಂ ಚಿನ್ನದ ಒಡವೆಗಳನ್ನು ಬದಲಾಯಿಸಿಕೊಳ್ಳಲು ಬಂದಿದ್ದಾರೆ. ಆಟೋ ಇಳಿಯುವ ವೇಳೆ ಚಿನ್ನದ ವಡವೆ ಇದ್ದ ವ್ಯಾನಿಟಿ ಬ್ಯಾಗ್ ಮರೆತುಹೋಗಿದ್ದಾರೆ. ಕೂಡಲೇ ಎಚ್ಚೆತ್ತ ಜ್ಯೋತಿ ಅವರು ಲಷ್ಕರ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ನಿರೀಕ್ಷಕ ಮಹಮದ್ ಸಲೀ ಅಬ್ಬಾಸ್ ಅವರು ಮಿಂಚಿನ ಕಾರ್ಯಾಚರಣೆ ನಡೆಸಿ ಕೇವಲ ಒಂದು ಗಂಟೆಯಲ್ಲೇ ಆಟೋ ಪತ್ತೆ ಹಚ್ಚಿ, ಚಿನ್ನದ ಆಭರಣಗಳಿದ್ದ ಬ್ಯಾಗ್ ಪತ್ತೆಹಚ್ಚಿದ್ದಾರೆ.
ಜ್ಯೋತಿ ಅವರು ಕುಳಿತಿದ್ದ ಸೀಟ್ ಹಿಂದೆ ಇದ್ದ ವ್ಯಾನಿಟಿ ಬ್ಯಾಗ್ ಅನ್ನ ಆಟೋ ಚಾಲಕ ಮಹಮದ್ ನಸೀರ್ ಅವರೂ ಸಹ ಗಮನಿಸಿಲ್ಲ. ಪೊಲೀಸರು ಆಟೋ ಪರಿಶೀಲನೆ ನಡೆಸಿದಾಗ ಬ್ಯಾಗ್ ಇರುವುದು ಪತ್ತೆಯಾಗಿದೆ. ಘಟನೆ ನಡೆದ ಕೇವಲ ಒಂದು ಗಂಟೆ ಅವಧಿಯಲ್ಲಿ ಕಳೆದುಕೊಂಡಿದ್ದ ಚಿನ್ನಾಭರಣ ಇದ್ದ ಬ್ಯಾಗ್ ಅನ್ನು ಮಾಲೀಕರಿಗೆ ತಲುಪಿಸುವಲ್ಲಿ ಲಷ್ಕರ್ ಠಾಣೆ ಇನ್ಸ್ ಪೆಕ್ಟರ್ ಅಬ್ಬಾಸ್ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
===================