ತುಮಕೂರು : ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 80ಕ್ಕೂ ಹೆಚ್ಚು ಕುಕ್ಕರ್ಗಳನ್ನು ತುಮಕೂರು ಜಿಲ್ಲೆಯ ಕುಣಿಗಲ್ನ 22ನೇ ವಾರ್ಡ್ನಲ್ಲಿ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜೆಡಿಎಸ್ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ಮಲ್ಲಿಪಾಳ್ಯದ ಬೆಟ್ಟಸ್ವಾಮಿಗೆ ಸೇರಿದ ಗೋದಾಮಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಕುಕ್ಕರ್ಗಳ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ರಂಗನಾಥ್ ಭಾವಚಿತ್ರವಿರುವ ಕುಕ್ಕರ್ಗಳನ್ನು ಜಪ್ತಿ ಮಾಡಲಾಗಿದೆ.