ಆನೆ ಹೋಗುತ್ತಿರುತ್ತೆ, ನರಿಯೊಂದು ಕಾದು ಕುಳಿತಿರುತ್ತೆ.ಅದೇನೋ ಬೀಳುತ್ತೇ ಎಂದು ನರಿ ಕಾಯ್ತಿರುತ್ತೆ.
ಅದು ಬೀಳುವುದಿಲ್ಲ, ಆನೆ ನಡೆಯುವುದನ್ನು ನಿಲ್ಲಿಸುವುದಿಲ್ಲ ಎಂದು ವಿರೋಧ ಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ.
ದಸರಾ ಗಜಪಯಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮುಂದುವರೆಸಿದ್ದಾರೆ. ಮುಡಾ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ. ನಮ್ಮಲ್ಲಿ ಯಾವ ಬೆಳವಣಿಗೆಗಳು ನಡೆಯುತ್ತಿಲ್ಲ. ಸರ್ಕಾರಕ್ಕೆ ಯಾಕ್ರೀ ಸಮಸ್ಯೆ ಆಗುತ್ತೆ? ಸರ್ಕಾರ ಯಾಕೆ ಅಭದ್ರ ಆಗುತ್ತೆ. ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ. 7 ಕೋಟಿ ಜನ ಮತ ಹಾಕಿ ಬಂದಿರುವ ಸರ್ಕಾರ ಇದು.ಇದನ್ನು ಅಸ್ಥಿರವಾಗಿಸಲು ಹೇಗೆ ಸಾಧ್ಯ ಎಂದು ಪ್ರಶ್ನಸಿದರಲ್ಲದೆ, ಮುಡಾ ಪ್ರಕರಣ ದಸರಾದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.ಈ ಬಾರಿ ವಿಜೃಂಭಣೆಯಿಂದ ದಸರಾ ಮಾಡುತ್ತೇವೆ ಎಂದು ಹೇಳಿದರು.