ಸ್ವಪಕ್ಷದ ಶಾಸಕರ ಅಸಮಾಧಾನ ತಣಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗುತ್ತಿದೆ. ಶಾಸಕರೊಂದಿಗೆ ಸಭೆ ನಡೆಸಿದರೂ ಶಾಸಕರ ಬೇಸರ ಶಮನವಾಗುತ್ತಿಲ್ಲ. ಸರ್ಕಾರ, ಸಚಿವರು ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಸ್ವಪಕ್ಷೀರಿಂದಲೇ ಅಸಮಾಧಾನ ಮುಂದುವರಿದಿದೆ. ಸಚಿವರನ್ನು ವಿಶ್ವಾಸಕ್ಕೆ ಪಡೆದರೂ ಶಾಸಕರನ್ನು ವಿಶ್ವಾಸಕ್ಕೆ ಪಡೆಯುವಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿಫಲರಾಗುತ್ತಿದ್ದಾರೆ.