ದೇಹದ ಅಂಗಾಂಗ ದಾನ ಮಾಡಲು ಒಪ್ಪಿಗೆ
ಪ್ರತಿನಿಧಿ ವರದಿ ಮಂಡ್ಯ
ಕೆ.ಆರ್.ಸಾಗರದ ಸಂತೆಮಾಳದ ಮುಖ್ಯ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ರವಿಚಂದ್ರ (೩೯) ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ನಿಧನರಾದರು.
ಕೆ.ಆರ್.ಸಾಗರ ಸಮೀಪದ ಹುಲಿಕರೆ ಗ್ರಾಮದ ನಿವಾಸಿ ರವಿಚಂದ್ರ ಮೃತರು. ಸಲೂನ್ ನಡೆಸುತ್ತಿದ್ದ ಇವರು, ಶುಕ್ರವಾರ ರಾತ್ರಿ ಅಂಗಡಿಗೆ ಹೋಗಿ ವಾಪಸ್ ತಮ್ಮ ನಿವಾಸಕ್ಕೆ ಬರುವಾಗ ನಾಯಿ ಬೈಕ್ ಗೆ ಅಡ್ಡಬಂದು ಅಪಘಾತವಾಗಿತ್ತು.
ಗಾಯಾಳುವನ್ನು ಮೈಸೂರು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ರವಿಚಂದ್ರ ಅವರ ಮೆದಳು ನಿಷ್ಕ್ರಿಯಗೊಂಡ ಕಾರಣ ಅವರ ಪತ್ನಿ ರಂಜಿತ ತನ್ನ ಪತಿಯ ದೇಹದ ಅಂಗಾಗಳು ದಾನ ಮಾಡಲು ಒಪ್ಪಿದ್ದಾರೆ. ರವಿಚಂದ್ರ ಅವರ ಕಿಡ್ನಿ, ಚರ್ಮ, ಹೃದಯ ಸೇರಿ ದೇಹದ ಹಲವು ಭಾಗಗಳನ್ನು ದಾನ ನೀಡಿದ್ದಾರೆ.
ಕೆ.ಆರ್.ಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರಿಗೆ ಪತ್ನಿ ರಂಜಿತ ಮತ್ತು ಇಬ್ಬರು ಹೆಣ್ಣು ಮಕ್ಕಳು ಇದ್ದರೆ. ಅಂತ್ಯಕ್ರಿಯೆ ಮೃತರ ಸ್ವಗ್ರಾಮ ಬನ್ನೂರಿನಲ್ಲಿ ನಡೆಯಲಿದೆ.