ಮೈಸೂರು: ಜ್ಯೋತಿನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸೆ.14ರಂದು ಬೆಳಗ್ಗೆ 10ರಿಂದ ಸಂಜೆ 5:30ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಅನಿಯಮಿತ ನಿಲುಗಡೆಯಾಗಲಿದೆ. ನಗರದ ಜಲಪುರಿ, ಗಾಯತ್ರಿಪುರಂ, ಜ್ಯೋತಿನಗರ, ಉದಯಗಿರಿ, ಕ್ಯಾತಮಾರನಹಳ್ಳಿ, ಶಾಂತಿನಗರ 1 ಮತ್ತು 2ನೇ ಹಂತ, ಗಣೇಶ್ ನಗರ, ಸತ್ಯನಗರ, ಮಹದೇವಪುರ ರಸ್ತೆ, ಜರ್ಮನ್ ಪ್ರೆಸ್, ಉಸ್ಮಾನಿಯಾ ಬ್ಲಾಕ್, ಗೌಸಿಯಾನಗರ, ರಾಘವೇಂದ್ರ ನಗರ, ಗಿರಿಯಾಬೋವಿ ಪಾಳ್ಯ, ಯರಗನಹಳ್ಳಿ, ಬನ್ನೂರು ರಸ್ತೆ, ಸಿದ್ದಾರ್ಥನಗರ, ಆಲನಹಳ್ಳಿ ಬಡಾವಣೆ, ಕೆಎಸ್ಆರ್ಟಿಸಿ ಬಡಾವಣೆ, ಪೊಲೀಸ್ ಬಡಾವಣೆ 1ನೇ ಮತ್ತು 2ನೇ ಹಂತ, ಗಿರಿದರ್ಶಿನಿ ಬಡಾವಣೆ, ನಂದಿನಿ ಬಡಾವಣೆ 1ನೇ ಮತ್ತು 2ನೇ ಹಂತ, ನೇತಾಜಿ ಬಡಾವಣೆ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸಬೇಕೆಂದು ಎನ್.ಆರ್. ಮೊಹಲ್ಲಾ ವಿಭಾಗದ ಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
==================
ನಾಳೆ ನಾಟಕ ಪ್ರದರ್ಶನ
ಮೈಸೂರು: ರಂಗಾಯಣದಲ್ಲಿ ನಡೆಯುವ ವಾರಾಂತ್ಯ ಪ್ರದರ್ಶನದಲ್ಲಿ ಸೆ.15ರಂದು ಸಂಜೆ 6.30ಕ್ಕೆ ರಂಗಾಯಣದ ಭೂಮಿಗೀತ ವೇದಿಕೆಯಲ್ಲಿ ‘ಎ ಫ್ರೆಂಡ್ ಬಿಯಾಂಡ್ ದ ಫೆನ್ಸ್’ ನಾಟಕ ಪ್ರದರ್ಶನ ನಡೆಯಲಿದೆ. ಮಂಗಳೂರಿನ ಕಲಾಭಿ ಥಿಯೇಟರ್ ತಂಡದಿಂದ ಪ್ರಸ್ತುತಪಡಿಸುತ್ತಿರುವ ಈ ನಾಟಕವನ್ನು ಶ್ರವಣ್ ಹೆಗ್ಗೋಡು ನಿರ್ದೇಶಿಸಿದ್ದಾರೆ ಎಂದು ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
===================
ಇಂದು ಮೈಸೂರಿಗೆ ಸಿಎಂ ಭೇಟಿ
ಮೈಸೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಿಎಂ ಸಿದ್ದರಾಮಯ್ಯ ಸೆ.14ರಂದು ಶನಿವಾರ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 11ಕ್ಕೆ ಮೈಸೂರಿಗೆ ಆಗಮಿಸಲಿರುವ ಅವರು, ಬೆಳಗ್ಗೆ 11.15ಕ್ಕೆ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾಮಂದಿರದಲ್ಲಿ ಆಯೋಜಿಸಿರುವ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ 4.30ಕ್ಕೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗಗನಚುಕ್ಕಿ ಜಲಪಾತಕ್ಕೆ ತೆರಳಲಿದ್ದಾರೆ.