ಚಾಮರಾಜನಗರ: ದೀಪಾವಳಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ಸಾಧ್ಯತೆ ಇದೆ. ಇದರಿಂದ ಸಂಚಾರ ದಟ್ಟಣೆಯಿಂದ ಅಪಘಾತ ಸಂಭವಿಸುವ ಸಾಧ್ಯತೆಯೂ ಇದೆ. ಹೀಗಾಗಿ ದ್ವಿಚಕ್ರ ವಾಹನ, ಆಟೋಗಳನ್ನು ಮಲೆ ಮಹದೇಶ್ವರ ಬೆಟ್ಟಕ್ಕೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ. ದ್ವಿ ಚಕ್ರ ವಾಹನ ಹಾಗೂ ಆಟೋಗಳನ್ನು ತಾಳುಬೆಟ್ಟದಲ್ಲಿ ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.