ಚೆನ್ನೈ ಜ.09: ಸನಾತನ ಧರ್ಮ ಡೆಂಗ್ಯೂ ಮೆಲೆರಿಯಾ ಇದ್ದಂತೆ, ಇದನ್ನು ಸಂಪೂರ್ಣವಾಗಿ ನಾಶ ಮಾಡಬೇಕು ಎಂದು ಕರೆಕೊಟ್ಟ ತಮಿಳುನಾಡು ಕ್ರೀಡಾ ಸಚಿವ ಉದನಿಧಿ ಸ್ಟಾಲಿನ್ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಇದೇ ಉದಯನಿಧಿ ಸ್ಟಾಲಿನ್ಗೆ ಇದೀಗ ತಮಿಳುನಾಡು ಉಪಮುಖ್ಯಮಂತ್ರಿ ಪಟ್ಟ ಕಟ್ಟಲು ಎಲ್ಲಾ ಸಿದ್ಧತೆ ನಡೆದಿದೆ. ಸನಾತನ ಧರ್ಮದ ನಾಶಕ್ಕೆ ಕರೆಕೊಟ್ಟ ಮುಖ್ಯಮಂತ್ರಿ ಪುತ್ರ ಉದಯನಿಧಿ ಸ್ಟಾಲಿನ ಶೀಘ್ರದಲ್ಲೇ ತಮಿಳುನಾಡು ಉಪಮುಖ್ಯಮಂತ್ರಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
ಡಿಎಂಕೆ ಪಕ್ಷದ ಮುಖ್ಯಸ್ಥ ಎಂಕೆ ಸ್ಟಾಲಿನ್ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದರೆ, ಅವರ ಪುತ್ರ ಇದೇ ಉದಯನಿಧಿ ಸ್ಟಾಲಿನ್ ಉಪಮುಖ್ಯಮಂತ್ರಿಯಾಗಿ ಬಡ್ತಿ ಪಡೆಯಲಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಎಂಕೆ ಸ್ಟಾಲಿನ್ ವಿದೇಶಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ವೇಳೆ ತಮ್ಮ ಕುಟುಂಬದಲ್ಲಿರುವ ಡಿಎಂಕೆ ಹಿಡಿತ ಒಂದಿಂಚು ಕದಲದಂತೆ ಮಾಡಲು ಇದೀಗ ಉದಯನಿಧಿ ಸ್ಟಾಲಿನ್ಗೆ ಡಿಸಿಎಂ ಪಟ್ಟ ಕಟ್ಟಲಾಗುತ್ತಿದೆ. ಎಂಕೆ ಸ್ಟಾಲಿನ್ ಅನುಪಸ್ಥಿತಿಯಲ್ಲಿ ಪುತ್ರ ಉದಯನಿಧಿ ಸ್ಟಾಲಿನ್ ಉಪಮುಖ್ಯಮಂತ್ರಿಯಾಗಿ ತಮಿಳುನಾಡು ಜವಾಬ್ದಾರಿ ನಿರ್ವಹಿಸಲಿದ್ದಾರೆ.