ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಪರಿಷತ್ ಸ್ಥಾನ ಸಿಗೋದು ಬಹುತೇಕ ಖಚಿತವಾಗಿದೆ. ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ನಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ.ವರುಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದರು.ರಾಹುಲ್ ಗಾಂಧಿ ಸಲಹೆ ಮೇರೆಗೆ ವರುಣ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಿದ್ದಾರೆ. ಹೀಗಾಗಿ ಸಿಎಂ ಪುತ್ರನಿಗೆ ಪರಿಷತ್ ಸ್ಥಾನ ಒಲಿದಿದೆ.ಜಗದೀಶ್ ಶೆಟ್ಟರ್ ರಿಂದ ತೆರವಾದ ಸ್ಥಾನ ಯತೀಂದ್ರ ಗೆ ನೀಡಲು ಹೈ ಕಮಾಂಡ್ ನಿರ್ಧಾರ ಮಾಡಿದೆ.
ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರಗೆ ವಿಧಾನ ಪರಿಷತ್ ಟಿಕೆಟ್ ನೀಡುವಂತೆ ಡಿಮ್ಯಾಂಡ್ ಬಂದಿದೆ.ಈ ಸಂಬಂಧ ವರುಣ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಒತ್ತಾಯ ಮಾಡಿದ್ದಾರೆ.ಯತೀಂದ್ರ ತಮ್ಮ ತಂದೆಗಾಗಿ ವರುಣ ಕ್ಷೇತ್ರ ತ್ಯಾಗ ಮಾಡಿದ್ದಾರೆ.
ವರುಣ ಕ್ಷೇತ್ರದಲ್ಲಿ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿ ಮಾಡಿದ್ದಾರೆ. ಸಿದ್ದರಾಮಯ್ಯರ ಗೆಲುವಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಪಾತ್ರ ಬಹುದೊಡ್ಡದು. ಕ್ಷೇತ್ರದ ಮೂಲೆ ಮೂಲೆಗೂ ಸಂಚರಿಸಿ ಪಕ್ಷ ಸಂಘಟನೆ ಮಾಡಿದ್ದಾರೆ.ಯತೀಂದ್ರ ಸಿದ್ದರಾಮಯ್ಯರಂತಹ ಸಜ್ಜನ ವ್ಯಕ್ತಿ ರಾಜಕಾರಣದಲ್ಲಿ ಇರಬೇಕು. ಯತೀಂದ್ರ ಸಿದ್ದರಾಮಯ್ಯಗೆ ವಿಧಾನ ಪರಿಷತ್ ಟಿಕೆಟ್ ನೀಡಬೇಕು ಎಂದು ಆಗ್ರಹ ಕೇಳಿಬಂದಿದೆ.