ಪ್ರತಿನಿಧಿ ವರದಿ ಸರಗೂರು
ತಾಲೂಕು ಪಂಚಾಯಿತಿ ಸರಗೂರು, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಎಚ್.ಡಿ.ಕೋಟೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಎಚ್.ಡಿ.ಕೋಟೆ ಹಾಗೂ ಗ್ರಾಮ ಪಂಚಾಯಿತಿ ಮುಳ್ಳೂರು ವತಿಯಿಂದ ಗ್ರಾಮ ಆರೋಗ್ಯ ವಿಶೇಷ ಸಭೆಯನ್ನು ಮುಳ್ಳೂರು ಪಂಚಾಯಿತಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ಮಾತನಾಡಿ, ಮಧುಮೇಹ, ಅಧಿಕ ರಕ್ತದೊತ್ತಡ, ಕ್ಷಯರೋಗ, ಅಪೌಷ್ಟಿಕತೆ ಮತ್ತು ರಕ್ತಹೀನತೆ, ಬಾಲ್ಯವಿವಾಹ, ಮುಟ್ಟಿನ ಸಮಸ್ಯೆ,
ಕುಡಿಯುವ ನೀರು ಮತ್ತು ಸ್ವಚ್ಛತೆ ಹಾಗೂ ಮಾನಸಿಕ ಕಾಯಿಲೆ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.
ಗ್ರಾಮ ಪಂಚಾಯಿತಿ ಮಟ್ಟದ ಎಲ್ಲ ಗ್ರಾಮಗಳ ಜನರಿಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಸೂಚಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಿನ್ನಮ್ಮ ಅಧ್ಯಕ್ಷತೆ ವಹಿಸಿದ್ದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗೇಂದ್ರ, ಪ್ರಭಾರ ಆರೋಗ್ಯ ಶಿಕ್ಷಣಾಧಿಕಾರಿ ನಾಗೇಂದ್ರ, ಅಂಗನವಾಡಿ ಮೇಲ್ವಿಚಾರಕರಾದ ರಂಜಿತಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರವಿರಾಜ್, ಆರೋಗ್ಯ ಇಲಾಖೆ ಸಿಬ್ಬಂದಿ ಉಮೇಶ್, ನೀಲಮ್ಮ, ವೀರಭದ್ರ, ಸುವೇಶ್, ಗ್ರಾಮ ಪಂಚಾಯಿತಿ ಸದಸ್ಯ ಸಿದ್ದರಾಜು, ರಾಮ ನಾಯಕ, ಸಿಬ್ಬಂದಿ ನಾಗರಾಜು, ಮಂಜುನಾಥ್, ಶಾಲಾ ಶಿಕ್ಷಕರು, ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಇನ್ನಿತರರಿದ್ದರು.