ಪ್ರತಿನಿಧಿ ವರದಿ ಗೋಣಿಕೊಪ್ಪ
ಕಾಫಿ ಮಂಡಳಿ ವತಿಯಿಂದ ಕಾರ್ಮಾಡು ಗ್ರಾಪಂ ಸಹಯೋಗದೊಂದಿಗೆ ಕಾರ್ಮಾಡು ಗ್ರಾಪಂ ಸಮುದಾಯ ಭವನದಲ್ಲಿ ಸೆ.23 ರ ಸೋಮವಾರ ಬೆಳಗ್ಗೆ 10.30 ಗಂಟೆಗೆ ಕಾಫಿ ಬೆಳೆ ಕಾರ್ಯಾಗಾರ ಆಯೋಜಿಸಲಾಗಿದೆ.
ಮಳೆಯಿಂದಾಗಿ ಕಾಫಿ ಗಿಡಗಳಲ್ಲಿನ ಕೊಳೆರೋಗ ನಿರ್ವಹಣೆ ಮತ್ತು ಕಾಫಿ ಉದುರುವುದರ ಬಗ್ಗೆ ಹಾಗೂ ಮಂಡಳಿಯ ಸಹಾಯ ಧನ, ಮರು ನಾಟಿ, ಗೋದಾಮು, ಕಾಫಿ ಕಣ, ಹೊಸ ಕೆರೆ, ಬಾವಿ, ಸ್ಪ್ರಿಂಕ್ಲೇರ್ ಉಪಕರಣ, ಮೋಟಾರ್, ಮಿನಿ ಟ್ರಾಕ್ಟರ್ ಯೋಜೆನಗೆ ಕಾಪಿಮಂಡಳಿಯಿಂದ ದೊರೆಯುವ ಸಹಾಯ ಧನದ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಕಾಫಿ ಮಂಡಳಿ ಬೇಸಾಯ ಶಾಸ್ತ್ರ ವಿಜ್ಞಾನಿ ಹಾಗೂ ಕಿರಿಯ ಸಂಪರ್ಕ ಅಧಿಕಾರಿ ಡಿ.ಎಸ್.ಮುಖಾರಿಬ್ ತಿಳಿಸಿದ್ದಾರೆ.
ಫೋಟೋ 19 ಜಿಕೆಪಿ 03 ; ಡಿ. ಎಸ್. ಮುಖಾರಿಬ್