ಪ್ರತಿನಿಧಿ ವರದಿ ಮೈಸೂರು
ಮರೆವಿನ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ನಮ್ಮ ನಡಿಗೆ ಆರೋಗ್ಯದೆಡೆಗೆ ಶೀರ್ಷಿಕೆಯಡಿ ಗುರುವಾರ ಚಾಮುಂಡಿಬೆಟ್ಟಕ್ಕೆ ಚಾರಣ ಏರ್ಪಡಿಸಲಾಗಿತ್ತು.
ಆಜ್ಞೈಮರ್ಸ್ ರಿಲೇಟಡ್ ಡಿಸ್ ಆರ್ಡರ್ಸ್ ಸೊಸೈಟಿ ಆಫ್ ಇಂಡಿಯಾ ಹಾಗೂ ಶಾರದಾವಿಲಾಸ ಫಾರ್ಮಸಿ ಕಾಲೇಜಿನ ಸಹಯೋಗದಲ್ಲಿ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಆಯೋಜಿಸಿದ್ದ ಚಾರಣಕ್ಕೆ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯವಾಗಿದ್ದು, ಇದಕ್ಕಾಗಿ ಒಂದಲ್ಲ ಒಂದು ರೀತಿಯ ದೈಹಿಕ ಕಸರತ್ತು ಮಾಡಬೇಕಾಗುತ್ತದೆ. ವಯಸ್ಸಾದ ನಂತರ ಮರೆಗುಳಿತನ ಸಮಸ್ಯೆ ಕಾಡಲಿದ್ದು, ಈ ಬಗ್ಗೆ ಅರಿವು ಮೂಡಿಸುವುದು ಉತ್ತಮ ಎಂದರು.
ಶಾರದಾವಿಲಾಸ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಹನುಮಂತಾಚಾರ್ ಜೋಶಿ ಮಾತನಾಡಿ, ಮರೆಗುಳಿ ಕಾಯಿಲೆಯು ಬುದ್ಧಿಮಾಂದ್ಯತೆಯ ಅತ್ಯಂತ ಸಾಮಾನ್ಯ ಕಾರಣವಾಗಿದೆ. ಅಸಹಜ ಮೆದುಳಿನ ಅಂಗಾಂಶ ಬದಲಾವಣೆಗಳಿಂದ ಇದು ಉಂಟಾಗುತ್ತದೆ. ಪ್ರತಿ ವರ್ಷ ಸೆಪ್ಟಂಬರ್ನಲ್ಲಿ ವಿಶ್ವ ಆಜ್ಢೈಮರ್ಸ್ ಮಾಸಿಕ ಆಚರಿಸಲಾಗುತ್ತದೆ. ಅದರಂತೆ ಮೈಸೂರಿನಲ್ಲಿ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕಾಲೇಜಿನಲ್ಲಿ ವಿಚಾರ ಸಂಕಿರಣ ಏರ್ಪಡಿಸಲಾಗಿತ್ತು. ಎರಡನೇ ಕಾರ್ಯಕ್ರಮವಾಗಿ ಚಾರಣ ಏರ್ಪಡಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಪಲ್ಲವಿ ಅರುಣ್, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕಿ ಡಾ.ಪಿ. ಸಂಧ್ಯಾ, ಎಆರ್ಡಿಎಸ್ಐ ಉಫಾಧ್ಯಕ್ಷ ಜಿ.ಎಸ್.
ಗಣೇಶ್, ಕಾರ್ಯದರ್ಶಿ ಕೆ.ಆರ್. ಗಣೇಶರಾವ್ ಇತರರಿದ್ದರು. ಚಾರಣದಲ್ಲಿ ಶಾರದಾವಿಲಾಸ ಫಾರ್ಮಸಿ ಕಾಲೇಜು, ಎಟಿಎಂಇ ಮತ್ತಿತರ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಚಾಮುಂಡಿಬೆಟ್ಟದಲ್ಲಿ ಮರೆಗುಳಿತನದ ಬಗ್ಗೆ ಅರಿವು ಮೂಡಿಸಲಾಯಿತು. ಅಲ್ಲದೇ ಆಸಕ್ತರಿಗೆ ಆರೋಗ್ಯ, ನೆನಪಿನ ಶಕ್ತಿ ತಪಾಸಣೆ ಕೂಡ ಮಾಡಲಾಯಿತು.
====================