ಬೆಂಗಳೂರು: ಜನವರಿ ನಂತರ ಕಾಂಗ್ರೆಸ್ ಸರ್ಕಾರ ಬಿದ್ದೋಗುತ್ತೆ ಎಂದು ಶಾಸಕ ಆರ್ ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ಕಾಂಗ್ರೆಸ್ನಲ್ಲಿ ಗ್ಯಾಂಗ್ಗಳಾಗಿವೆ ಹಾಗಾಗಿ ನಿಲ್ಲಲ್ಲ. ಇನ್ನು ಎಸ್.ಟಿ ಸೋಮಶೇಖರ್ ಅವರನ್ನ ಕರೆದು ಮಾತನಾಡುವ ಕೆಲಸ ಮಾಡುತ್ತೇವೆ. ಅವರು ಮುಂಚೆ ಅಲ್ಲಿದ್ದವರಲ್ಲ, ಅವರನ್ನ ಬಿಜೆಪಿಗೆ ನಾನೇ ಕರೆದುಕೊಂಡು ಬಂದಿದ್ದು, ಹಾಗಾಗಿ ಮಾತಾಡಿದ್ದಾರೆ ಎಂದರು.