ಮೈಸೂರು: ಇಂದು ದಿಢೀರನೆ ಮೈಸೂರಿಗೆ ಭೇಟಿ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ, ಮೈಸೂರಿನ ಕೆಜಿ ಕೊಪ್ಪಲಿನಲ್ಲಿರುವ ಶಾಸಕ ಹರೀಶ್ ಗೌಡ ಮನೆಗೆ ಭೇಟಿ ನೀಡಿದ್ದರು. ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ಹೈಕಮಾಂಡ್ ಮತ್ತು ರಾಜ್ಯನಾಯಕರುಗಳ ಭೇಟಿ ಮಾಡಿದ್ದ ಸತೀಶ್ ಜಾರಕಿಹೊಳಿ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ . ಶಾಸಕ ಹರೀಶ್ ಗೌಡ ನಿವಾಸಕ್ಕೆ ಸಚಿವ ಸತೀಶ್ ಜಾರಕಿ ಹೋಳಿ ಭೇಟಿ ವಿಚಾರವಾಗಿ ಶಾಸಕ ಹರೀಶ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಮೈಸೂರಿಗೆ ಬಂದಾಗ ಎಲ್ಲರನ್ನೂ ಭೇಟಿ ಮಾಡುವುದು ಮಾಮೂಲು. ಅದೇ ರೀತಿ ಇಂದು ಕೂಡ ನನ್ನ ಮನೆಗೆ ಬಂದಿದ್ದರು ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದಿದ್ದಾರೆ. ಇನ್ನು ಮುಖ್ಯಮಂತ್ರಿ ಬದಲಾವಣೆ ಮಾಡುವುದಿಲ್ಲ, ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಶಾಸಕ ಹರೀಶ್ ಗೌಡ ಹೇಳಿಕೆ ನೀಡಿದ್ದಾರೆ.