ಪ್ರತಿನಿಧಿ ವರದಿ ಕೃಷ್ಣರಾಜಪೇಟೆ
ಮಂಡ್ಯ ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿ ಯಾಗಿರುವ ತಮ್ಮನ್ನು ಬೆಂಬಲಿಸಿ ಆಶೀರ್ವಾದ ಮಾಡುವಂತೆ ಮಂಡ್ಯ ಲೋಕಸಭಾ ಅಭ್ಯರ್ಥಿ ಸ್ಟಾರ್ ಚಂದ್ರು ಮನವಿ ಮಾಡಿದರು.
ಕೆ.ಆರ್.ಪೇಟೆ ಪಟ್ಟಣದಲ್ಲಿ ರೋಡ್ ಶೋ ನಡೆಸಿ ಬಸವೇಶ್ವರ ದೇವಾಲಯದ ಆವರಣದಲ್ಲಿ ಮತಯಾಚನೆ ಮಾಡಿ ಮಾತನಾಡಿದರು. ನಾನು ಒಬ್ಬ ಸಾಮಾನ್ಯ ರೈತನ ಮಗನಾಗಿದ್ದು ಕಷ್ಟಪಟ್ಟು ಶ್ರಮದಿಂದ ಮೇಲೆ ಬಂದಿದ್ದೇನೆ. ಪ್ರಾಮಾಣಿಕವಾಗಿ ಜನರ ಸೇವೆ ಮಾಡಿ ಹುಟ್ಟಿದ ಮಣ್ಣಿನ ಋಣ ತೀರಿಸ ಲೆಂದು ರಾಜಕೀಯ ಕ್ಷೇತ್ರಕ್ಕೆ ಬಂದಿದ್ದೇನೆ. ಜಿಲ್ಲೆಯ ರೈತರ ಸ್ವಾಭಿಮಾನವನ್ನು ಎತ್ತಿಹಿಡಿಯಲು ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು, ನೊಂದವರು, ತುಳಿತಕ್ಕೊಳಗಾದವರು ಹಾಗೂ ಶೋಷಿತರ ಪರವಾಗಿ ಕೆಲಸ ಮಾಡಲು ತಮಗೊಂದು ಅವಕಾಶ ನೀಡುವಂತೆ ಮಂಡ್ಯ ಲೋಕಸಭಾ ಅಭ್ಯರ್ಥಿಯಾದ ಸ್ಟಾರ್ಚಂದ್ರು ಕೈ ಮುಗಿದು ಮನವಿ ಮಾಡಿದರು.
ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಮಾತನಾಡಿದರು. ಕಾಂಗ್ರೆಸ್ ಮುಖಂಡರಾದ ಬಿ.ಎಲ್.ದೇವರಾಜು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ತಾಪಂ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ರಾಜಶೇಖರ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಕೆ.ಬಿ.ಈಶ್ವರಪ್ರಸಾಧ್, ಪುರಸಭೆ ಮಾಜಿಅಧ್ಯಕ್ಷ ಕೆ.ಬಿ.ಮಹೇಶ್, ಪಿಎಲ್ಡಿ ಬ್ಯಾಂಕ್ ಮಾಜಿಅಧ್ಯಕ್ಷ ಕೆ.ಬಿ.ರವಿ, ಸ್ನೇಹಿತ ರಮೇಶ್, ಹಾಫಿಜುಲ್ಲಾ ಷರೀಫ್, ಆಯಾಜ್ ಉಪಸ್ಥಿತರಿದ್ದರು.
ಚಿತ್ರಶೀರ್ಷಿಕೆ: ೦೩ ಕೆ.ಆರ್.ಪೇಟೆ ೦೨ ಕೃಷ್ಣರಾಜಪೇಟೆ ಪಟ್ಟಣದಲ್ಲಿ ರೋಡ್ ಶೋ ನಡೆಸಿ ಬಸವೇಶ್ವರ ದೇವಾಲಯದ ಆವರಣದಲ್ಲಿ ಮತಯಾಚನೆ ಮಾಡಿದ ಸ್ಟಾರ್ ಚಂದ್ರು ಮಾತನಾಡಿದರು. ಕೆ.ಬಿ.ಚಂದ್ರಶೇಖರ್, ಬಿಎಲ್.ದೇವರಾಜು ಮತ್ತಿತರರು ಇದ್ದಾರೆ.