ಚಿಕ್ಕಬಳ್ಳಾಪುರ : ಎಸ್ ಜೆ ಸಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು, ಅಧ್ಯಾಪಕರು ಸಸಿಗಳನ್ನು ನೆಡುವುದರಲ್ಲಿ ಪಾಲ್ಗೊಂಡು ಪರಿಸರದ ಮಹತ್ವ, ಜಾಗೃತಿ ಅಭಿಯಾನ ಕೈಗೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ.ಜಿ.ಟಿ ರಾಜು ಮಾತನಾಡಿ, ಪ್ರಕೃತಿ ನಾಶಕ್ಕೆ ಕಡಿವಾಣ ಹಾಕಿ ಹೆಚ್ಚು ಹೆಚ್ಚು ಗಿಡಗಳನ್ನು ಬೆಳೆಸಿ, ಮರಗಳನ್ನು ಉಳಿಸಿ ಪ್ರಕೃತಿ ಮಾತೆಯ ಒಡಲು ಹಸಿರಾಗಿರುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಎಂದು ತಿಳಿಸಿದರು.
ಈ ವರ್ಷ ವಿಶ್ವ ಪರಿಸರ ದಿನವನ್ನು ಭೂಮಿ ಪುನಃ ಸ್ಥಾಪನೆ, ಮರುಭೂಮೀಕರಣ ಮತ್ತು ಭರ ಸ್ಥಿತಿ ಸ್ಥಾಪಕತ್ವ ಎಂಬ ವಿಷಯದೊಂದಿಗೆ ವಿಶ್ವದಾದ್ಯಂತ ಆಚರಿಸಲಾಗುತ್ತಿದೆ.
ಇದೇ ವೇಳೆ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಮುಖ್ಯ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ, ಎಸ್.ಜೆ.ಸಿ.ಐ.ಟಿ ಕುಲಸಚಿವರು ಸುರೇಶ.ಜೆ, , ಮುಖ್ಯಸ್ಥರು, ಪ್ರಾಧ್ಯಾಪಕರು ಡಾ.ನಾರಾಯಣ ಪಾಲ್ಗೊಂಡಿದ್ದರು.