ಮೈಸೂರು: ನಿಮ್ಮ ತುಘಲಕ್ ದರ್ಬಾರ್ ಹೆಚ್ಚು ದಿನ ನಡೆಯೋದಿಲ್ಲ. ಸರ್ಕಾರಿ ಸಂಬಳ ಕೊಟ್ಟು ಕುಮಾರಣ್ಣನಿಗೆ ಬೈಯ್ಯಲು ಇಟ್ಟುಕೊಂಡಿದ್ದೀರಾ? ನಿಮಗೆ ನಾಚಿಕೆ ಆಗಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಸಾ ರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ.
ಸಿಎಂಗೆ ತಮ್ಮ ಕೈಯಲ್ಲಿ ಸಚಿವ ಸಂಪುಟದ ಸದಸ್ಯರಿಗೆ ಮಾತಾಡೋಕೆ ಆಗಿಲ್ಲ ಅದಕ್ಕೆ ಅಧಿಕಾರಿಗಳಿಂದ ಹೀಗೆ ಮಾಡಿಸುತ್ತಿದ್ದಾರೆ. ಕೇಂದ್ರ ಸಚಿವರಿಗೆ ಒಬ್ಬ ಭ್ರಷ್ಟ ಅಧಿಕಾರಿಯಿಂದ ಹೀಗೆ ಹೇಳಿಸಿದ್ದಾರೆ. ಕರ್ನಾಟಕದಲ್ಲಿ ಹಂದಿಯ ತರ ತಿಂದಿರುವ ಅಧಿಕಾರಿಯಿಂದ ಈ ಹೇಳಿಕೆ ಬಂದಿದೆ ಎಂದರೆ ಕಾಂಗ್ರೆಸ್ಗೆ ಎಂತಹ ದುರ್ದೈವ ಬಂದಿದೆ. ಕಾಂಗ್ರೆಸ್ ಪಕ್ಷ ಅಧಿಕಾರಿಗಳನ್ನು ಬಳಕೆ ಮಾಡಿಕೊಳ್ಳುತ್ತಿದೆ. ಕರ್ನಾಟಕದ ಇತಿಹಾಸದಲ್ಲಿ ಕೇಂದ್ರ ಸಚಿವನಿಗೆ ಹೀಗೆ ಹೇಳಿರೋದು ಮೊದಲ ಸಾರಿ ಕಾಂಗ್ರೆಸ್ ಸರ್ಕಾರದ ಪಾತ್ರ ಇಲ್ಲ ಅಂದಿದ್ರೆ ಕ್ರಮ ಆಗಬೇಕಾಗಿತ್ತು ಬದಲಾಗಿ ಅಧಿಕಾರಿಯ ಪರವಾಗಿ ಇದ್ದಾರೆ ಎಂದರೆ ರಾಜ್ಯ ಸರ್ಕಾರ ಇದರ ಹಿಂದೆ ಇದೆ ಎಂದು ಸಾ ರಾ ಮಹೇಶ್ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಹಂದಿ ಜೊತೆ ಕಾಳಗ ಬೇಡ ಎಂದು ಎಡಿಜಿಪಿ ಚಂದ್ರಶೇಖರ್ ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದರು ಈ ವಿಚಾರವಾಗಿ ಮಾತನಾಡಿದ ಸಾರಾ ಮಹೇಶ್, ಮೊನ್ನೆಯಿಂದ ಸೋಷಿಯಲ್ ಮೀಡಿಯಾದಲ್ಲಿ ಒಂದು ಪತ್ರ ಹರಿದಾಡುತ್ತಿದೆ. ಯಾವುದೇ ಲೆಟರ್ ಹೆಡ್ ಸೀಲ್ ಏನು ಇಲ್ಲ. ಇದು ಆಂತರಿಕ ಪತ್ರ ಸರ್ಕಾರಿ ನೌಕರ ಬರೆದಿರೋದ, ಯಾರೋ ಕಿಡಿಗೇಡಿ ಬರೆದಿರೋದ ಎಂದೂ ಗೊತ್ತಾಗುತ್ತಿಲ್ಲ. ನೌಕರ ಬರೆದಿದ್ರೆ ಸ್ಪಷ್ಟನೆ ಕೊಡಬೇಕು.
ಕುಮಾರಸ್ವಾಮಿ ಕೇಂದ್ರ ರಾಜ್ಯದ ಎಲ್ಲ ಅಧಿಕಾರಿಗಳನ್ನು ಒಳ್ಳೆಯ ರೀತಿ ನಡೆಸಿಕೊಳ್ಳುತ್ತಾರೆ. ಅಧಿಕಾರಿಗಳಿಗೆ ಕುಮಾರಣ್ಣ ಅವರಿಂದ ನೋವಾಗಿದ್ಯಾ? ಅವರಿಗೆ ನೋವಾಗಿದ್ದರೆ ಅದಕ್ಕೊಂದು ರೀತಿ ನೀತಿ ಇದೆ.
ನ್ಯಾಯಾಲಯಕ್ಕೆ ಬೇಕಿದ್ರೆ ಹೋಗಬಹುದಿತ್ತು.ಅದನ್ನು ಬಿಟ್ಟು ಸರ್ಕಾರಿ ನೌಕರ ಕೇಂದ್ರ ಸಚಿವರ ಬಗ್ಗೆ ಈ ರೀತಿ ಪತ್ರ ಹರಿಬಿಟ್ಟಿದ್ದಾರೆ.ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟಿದೆ ಎಂದು ಗೊತ್ತಾಗುತ್ತದೆ.
ಅಧಿಕಾರಿಗಳು ರಾಜಕಾರಣಿಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳು ಬಹಳಷ್ಟು ಪ್ರಮಾಣಿಕರು ಇದ್ದಾರೆ. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಮೇಲೆ ಇನ್ಸ್ಪೆಕ್ಟರ್ ಒಬ್ಬರು ಯಾಕೆ ಆರೋಪ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ನಿಮ್ಮ ಐಪಿಎಸ್ ಅಧಿಕಾರ ಇರೋದು. ಐಪಿಎಸ್ ಅಧಿಕಾರಿ ಒಬ್ಬರಿಗೆ ಒಂದು ರಾಜ್ಯದಲ್ಲಿ 5 ವರ್ಷ ಮಾತ್ರ ಆದರೆ ರಾಜ್ಯಕ್ಕೆ ಬಂದು 11 ವರ್ಷ ಆಗಿದೆ. ನೀವು ಯಾರ ಕಾಲು ಹಿಡಿದು ರಾಜ್ಯದಲ್ಲಿ ಉಳಿದುಕೊಂಡಿದ್ದೀರಾ? ಅವರಿವರ ಮನೆಯಲ್ಲಿ ಚಮಚಗಿರಿ ಮಾಡುವ ಅಧಿಕಾರಿಗಳು ಇದ್ದಾರೆ ಕರ್ನಾಟಕವನ್ನು ನೀವು ಹಂದಿ ತರಹ ಮೇಯಲು ಇದ್ದೀರಾ ಎಂದು ಪ್ರಸನಿಸಿರುವ ಅವರು, ಕುಮಾರಣ್ಣ ನಿಮ್ಮಂತ ಹಲವರ ಸಂಚಿನಿಂದ ಆರೋಪಿ ಅಷ್ಟೇ,ಕುಮಾರಣ್ಣ ಅಪರಾಧಿ ಅಲ್ಲ. ನೀವು ಎಡಿಜಿಪಿ ಆದ್ರೆ ಕೊಂಬಿಲ್ಲ ನಿಮ್ಮ ಆಸ್ತಿಯನ್ನು ಬಹಿರಂಗ ಪಡಿಸಿ ಎಂದಿದ್ದಾರೆ.
ಈತನ ವಿರುದ್ಧ ಮೇಲಾಧಿಕಾರಿಗಳು ಕ್ರಮ ವಹಿಸಬೇಕು, ಪ್ರೋಟೋಕಾಲ್ ವ್ಯವಸ್ಥೆಯೇ ಇಲ್ಲ. ಕೆಲವು ನಮ್ಮ ಸ್ನೇಹಿತ ಕುಮ್ಮಕ್ಕಿನಿಂದ ಈ ಕೆಲಸ ಮಾಡಿದ್ದಾರೆ. ಅಧಿಕಾರ ಎನ್ನೋದು ಯಾರಿಗೂ ಶಾಶ್ವತ ಅಲ್ಲ ಎಂದು ಎಡಿಜಿಪಿ ಚಂದ್ರಶೇಖರ್ ವಿರುದ್ಧ ಸಾ ರಾ ಮಹೇಶ್ ಕಿಡಿಕಾರಿದ್ದಾರೆ.
ದಕ್ಷ ಅಧಿಕಾರಿ ಅಂತೀರಾ, ಇಲ್ಲಿ ಚಮಚಗಿರಿ ಮಾಡಿ ಉಳಿದುಕೊಂಡಿದ್ದೀರಾ ಎಂದು ಪ್ರಶ್ನಿಸಿರುವ ಅವರು, ಜನ ಬೀದಿಗೆ ಇಳಿದು ಹೋರಾಟ ಮಾಡುವ ಮುನ್ನ ಡಿಜಿ, ಐಜಿ ಇಲಾಖೆ ಸರಿ ಮಾಡಿ ಎಂದು ಎಚ್ಚರಿಕೆ ನೀಡಿದ್ದಾರೆ. ನಮ್ಮ ಸ್ನೇಹಿತರು ಇದ್ದರೇ ಕೇಳಿಸಿಕೊಳ್ಳಿ ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ತುಘಲಕ್ ದರ್ಬಾರ್ ಹೆಚ್ಚು ದಿನ ನಡೆಯೋದಿಲ್ಲ ಹಿಸ್ಟರಿ ರಿಪಿಟ್ ಆಗುತ್ತೆ. ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ. ಸಿಎಂಗೆ ಇಷ್ಟ ಆದ್ರೆ ನಿಮ್ಮ ಕಾನೂನು ಸಲಹೆಗಾರನನ್ನಾಗಿ ಮಾಡಿಕೊಳ್ಳಿ. ಚಂದ್ರಶೇಖರ್ಗೆ ಇಷ್ಟ ಆದ್ರೆ ಖಾಕಿ ಕಳಚಿ ರಾಜಕಾರಣಕ್ಕೆ ಬರಲಿ. ನೀವು ತಿನ್ನೋದು ಸಾರ್ವಜನಿಕರ ಅನ್ನ. ಅದನ್ನು ನೆನಪು ಇಟ್ಟುಕೊಂಡು ಕೆಲಸ ಮಾಡಬೇಕು ಎಂದರು.